ಆರು ವರ್ಷಗಳ ಬಳಿಕ 264 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ- ಸಾರಿಗೆ ಸಚಿವರಿಂದ ನೇಮಕಾತಿ ಆದೇಶ ವಿತರಣೆ

ಕೋವಿಡ್-19ರ ಕಾರಣ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಸುಮಾರು 06 ವರ್ಷಗಳ ನಂತರ ಅಂದರೆ ದಿನಾಂಕ: 13-10-2023 ರಂದು ಅನುಮತಿ ನೀಡಿರುತ್ತದೆ.

Written by - Yashaswini V | Last Updated : Jan 18, 2024, 10:23 AM IST
  • ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದಿನಾಂಕ: 17.01.2024 ರಂದು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇರವಾಗಿ ಅವರ ಆಯ್ಕೆಯ ಘಟಕಗಳಿಗೆ ನಿಯೋಜನೆ ಮಾಡಲಾಗಿದೆ.
  • ಇದೇ ಪ್ರಪ್ರಥಮ ಬಾರಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗಣಕೀಕೃತ ಕೌನ್ಸಿಲಿಂಗ್ ಮೂಲಕ ನೇರವಾಗಿ ಘಟಕಗಳನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಿ ಕೊಟ್ಟು ಸ್ಥಳ ನಿಯೋಜನೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಲಾಗಿದೆ.
  • ತಾಂತ್ರಿಕ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು 03 ತಿಂಗಳ ಒಳಗಾಗಿಯೇ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ.
ಆರು ವರ್ಷಗಳ ಬಳಿಕ 264 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ- ಸಾರಿಗೆ ಸಚಿವರಿಂದ ನೇಮಕಾತಿ ಆದೇಶ ವಿತರಣೆ title=

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನೂತನವಾಗಿ ತಾಂತ್ರಿಕ ಸಹಾಯಕ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಆದೇಶವನ್ನು ವಿತರಣೆ ಮಾಡಿದರು. 

ಈ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಿ, ಅಭ್ಯರ್ಥಿಗಳಿಗೆ ಅವರಿಚ್ಚೆಯಂತೆಯೆ ಘಟಕಗಳನ್ನು ಸಹ ಆರಿಸಿಕೊಳ್ಳಲು ಗಣಕೀಕರಣದ ಮೂಲಕ ಅವಕಾಶ ಕಲ್ಪಿಸಲಾಗಿದೆ. ನೇಮಕಗೊಂಡಿರುವ ಸಿಬ್ಬಂದಿಗಳು ಶ್ರಮವಹಿಸಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ನಿಗಮಕ್ಕೆ ಕೀರ್ತಿ ತರುವಂತೆ ಕಿವಿಮಾತು ಹೇಳಿದರು. 

ನಿಗಮದ ಪ್ರಸಕ್ತ ಕಾರ್ಯಾಚರಣೆಯ ಅಂಕಿ ಅಂಶಗಳ ವಿವರವು ಕೆಳಗಿನಂತಿವೆ.
>> ವಿಭಾಗಗಳು – 17
>> ಘಟಕಗಳು – 83
>> ಬಸ್ಸು ನಿಲ್ದಾಣಗಳು – 175
>> ಸಾರಿಗೆ ಸೇವೆಗಳು – 7640
>> ಒಟ್ಟು ಬಸ್ಸುಗಳು – 8358
>> ಪ್ರತಿದಿನ ಕಾರ್ಯಾಚರಿಸಿರುವ ಕಿ.ಮೀ – 27.84 ಲಕ್ಷ ಕಿ.ಮೀ
>> ಪ್ರತಿನಿತ್ಯ ಪ್ರಯಾಣಿಸಿರುವ ಅಂದಾಜು ಒಟ್ಟು ಪ್ರಯಾಣಿಕರ ಸಂಖ್ಯೆ – 32.34 ಲಕ್ಷ, 
>> ಶಕ್ತಿ ಯೋಜನೆ- ಪ್ರಯಾಣಿಸುವ ಮಹಿಳೆಯರ ಸಂಖ್ಯೆ -18.40 ಲಕ್ಷ, 
>> ಶಕ್ತಿ ಯೋಜನೆ- ಪ್ರಯಾಣಿಸುವ ಮಹಿಳೆಯರ ಟಿಕೆಟ್ ಮೊತ್ತ- 5.48 ಕೋಟಿ ರೂ.,
>> ಒಟ್ಟು ಸಿಬ್ಬಂದಿ – 33932

ಇದನ್ನೂ ಓದಿ- NIMHANS Recruitment 2024: ತಿಂಗಳಿಗೆ 90 ಸಾವಿರ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಕುರಿತ ವಿವರ ಕೆಳಕಂಡಂತಿದೆ: 
* ಕರಾರಸಾ  ನಿಗಮದಲ್ಲಿ ಪ್ರಸ್ತುತ 4588 ತಾಂತ್ರಿಕ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 353 ಮಹಿಳಾ ತಾಂತ್ರಿಕ ಸಿಬ್ಬಂದಿಗಳಾಗಿರುತ್ತಾರೆ. 
* ಕೋವಿಡ್-19ರ ಕಾರಣ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಸುಮಾರು 06 ವರ್ಷಗಳ ನಂತರ ಅಂದರೆ ದಿನಾಂಕ: 13-10-2023 ರಂದು ಅನುಮತಿ ನೀಡಿರುತ್ತದೆ.
* ನಿಗಮದ ಪದವೃಂದ ಮತ್ತು  ನೇಮಕಾತಿ ನಿಯಮಾವಳಿಯನ್ವಯ ಸಾಮಾನ್ಯ ಸಾಮಥ್ರ್ಯ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳು ಮಾತ್ರ ಮುಂದಿನ ಆಯ್ಕೆ ಪ್ರಕ್ರಿಯೆಗೆ ಅರ್ಹರಿದ್ದು, ಅದರಂತೆ 554 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
* ಸರ್ಕಾರವು ಅನುಮತಿ ನೀಡಿದ 300 ಹುದ್ದೆಗಳ ನೇಮಕಾತಿಗೆ ನಿಗಮದ ವಿಶೇಷ ನಿರ್ದೇಶಕ ಮಂಡಳಿಯ ಅನುಮೋದನೆ ಪಡೆದು ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ವಿಂಗಡಣೆ ಮಾಡಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ.
* ಅರ್ಹರಾದ ಅಭ್ಯರ್ಥಿಗಳಿಗೆ ಮೂಲ ದಾಖಲಾತಿ ಮತ್ತು ದೇಹದಾಢ್ರ್ಯತೆ ಪರಿಶೀಲನೆಯನ್ನು ದಿನಾಂಕ: 26-12-2023 ರಿಂದ 28-12-2023 ರವರೆಗೆ ಹಾಗೂ ಹೆಚ್ಚುವರಿಯಾಗಿ (ಗೈರುಹಾಜರಾದ ಅಭ್ಯರ್ಥಿಗಳಿಗೆ) ದಿನಾಂಕ: 03-01-2024 ರಂದು ನಡೆಸಲಾಯಿತು.
* ದಿನಾಂಕ: 05-01-2024 ರಂದು 262 ಆಯ್ಕೆಯಾದ ಅಭ್ಯರ್ಥಿಗಳ ಸಂಭವನೀಯ ಆಯ್ಕೆಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಸಲ್ಲಿಸಿಲು 7 ದಿನಗಳ ಕಾಲಾವಕಾಶ ನೀಡಲಾಗಿರುತ್ತದೆ.
* ಸಲ್ಲಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅರ್ಹ ಆಕ್ಷೇಪಣೆಗಳನ್ನು ಪುರಸ್ಕರಿಸಿ ಅಂತಿಮವಾಗಿ ದಿನಾಂಕ: 13-01-2024 ರಂದು 264 ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿರುತ್ತದೆ.  
* ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದಿನಾಂಕ: 17.01.2024 ರಂದು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇರವಾಗಿ ಅವರ ಆಯ್ಕೆಯ ಘಟಕಗಳಿಗೆ ನಿಯೋಜನೆ ಮಾಡಲಾಗಿದೆ. 
* ಇದೇ ಪ್ರಪ್ರಥಮ ಬಾರಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗಣಕೀಕೃತ ಕೌನ್ಸಿಲಿಂಗ್ ಮೂಲಕ ನೇರವಾಗಿ ಘಟಕಗಳನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಿ ಕೊಟ್ಟು ಸ್ಥಳ ನಿಯೋಜನೆಯಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಲಾಗಿದೆ. ತಾಂತ್ರಿಕ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು 03 ತಿಂಗಳ ಒಳಗಾಗಿಯೇ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ.
* ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅಧಿಸೂಚನೆ ಸಂದರ್ಭದಲ್ಲಿ ನಿಗಧಿಪಡಿಸಲಾಗಿದ್ದ 02 ವರ್ಷಗಳ ತರಬೇತಿ ಅವಧಿಯನ್ನು 01 ವರ್ಷಕ್ಕೆ ಇಳಿಕೆ ಮಾಡಲಾಗಿದೆ.  ಮುಂದುವರೆದು, ಮಾಹೆಯಾನ ನಿಗಧಿಪಡಿಸಲಾಗಿದ್ದ ತರಬೇತಿ ಭತ್ಯೆಯನ್ನು ರೂ.9,100/- ರಿಂದ ರೂ.14,000/- ಕ್ಕೆ ಏರಿಕೆ ಮಾಡಲಾಗಿದೆ.
* ನಿಗಮವು 2000 ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿಗಾಗಿ ಸದ್ಯದಲ್ಲಿಯೇ ಚಾಲನಾ ಪರೀಕ್ಷೆಗೆ ಕ್ರಮ ಜರುಗಿಸಲಿದೆ. 

ಇದನ್ನೂ ಓದಿ- GK Quiz: ಬ್ಲೇಡ್ ನ ಅಂಚಿನ ಮೇಲೂ ನಡೆಯಬಲ್ಲ ಜೀವಿ ಯಾವುದು ನಿಮಗೆ ಗೊತ್ತಾ?

ಇನ್ನು    ಈ ಸಮಾರಂಭದಲ್ಲಿ ವಿ.ಅನ್ಬುಕುಮಾರ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಕ ರಾ ರ ಸಾ ನಿಗಮ, ಡಾ. ನಂದಿನಿ ದೇವಿ. ಕೆ, ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮಾತ್ತು ಜಾಗೃತೆ), ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News