ಇದನ್ನು ತಿಂದ ತಕ್ಷಣ ಹೆಚ್ಚುತ್ತದೆ ಇನ್ಸುಲಿನ್ ! ನಾರ್ಮಲ್ ಆಗಿರುತ್ತದೆ Blood Sugar

Remedy for blood sugar : ಅಡುಗೆಮನೆಯಲ್ಲಿ ಇರಿಸಲಾಗಿರುವ ಈ ಮಸಾಲೆ ದೇಹದಲ್ಲಿ ಇನ್ಸುಲಿನ್ ಅನ್ನು  ಹೆಚ್ಚಿಸುತ್ತದೆ. ಇದನ್ನು ಪ್ರತಿದಿನ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೂಡಾ ನಿಯಂತ್ರಿಸುತ್ತದೆ.

Written by - Ranjitha R K | Last Updated : Mar 26, 2024, 12:56 PM IST
  • ಹೆಚ್ಚಿದ ಸಕ್ಕರೆಯ ಮಟ್ಟವು ನಮ್ಮ ದೇಹದಲ್ಲಿನ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ.
  • ಆಹಾರ ಪದ್ದತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ.
  • ಸಕ್ಕರೆ ಮಟ್ಟ ನಿಯಂತ್ರಿಸಲು ಬೆಳ್ಳುಳ್ಳಿ
 ಇದನ್ನು ತಿಂದ ತಕ್ಷಣ ಹೆಚ್ಚುತ್ತದೆ ಇನ್ಸುಲಿನ್ ! ನಾರ್ಮಲ್ ಆಗಿರುತ್ತದೆ Blood Sugar title=

Home Remedy for blood sugar : ಹೆಚ್ಚಿದ ಸಕ್ಕರೆಯ ಮಟ್ಟವು ನಮ್ಮ ದೇಹದಲ್ಲಿನ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ.ಇದರ ನಿಯಂತ್ರಣಕ್ಕಾಗಿ ಜನರು ತಮ್ಮ ಆಹಾರ ಪದ್ದತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ. ಈ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಿಕೊಳ್ಳುತ್ತಾರೆ. ಇಂದು ನಾವು ಹೇಳುವ ಮನೆ ಮದ್ದನ್ನು ಬಳಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಮಾತ್ರವಲ್ಲ, ಇದು ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಕೂಡಾ ಕಂಟ್ರೋಲ್ ಮಾಡುತ್ತದೆ. ನೀವು ಮಧುಮೇಹ ರೋಗಿಗಳಾಗಿದ್ದರೆ, ಈ  ಒಂದು ವಸ್ತು ನಿಮಗೆ ಅತ್ಯಂತ ಸಹಾಯಕವಾಗಿರುತ್ತದೆ.

ಸಕ್ಕರೆ ಮಟ್ಟ ನಿಯಂತ್ರಿಸಲು ಬೆಳ್ಳುಳ್ಳಿ : 
ಬೆಳ್ಳುಳ್ಳಿಯ ಗ್ಲೈಸೆಮಿಕ್ ಸೂಚ್ಯಂಕವು ಬಹುತೇಕ ಶೂನ್ಯವಾಗಿರುತ್ತದೆ.ಇದು ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿ. ಪ್ರತಿದಿನ 2-4 ಎಸಳು ಬೆಳ್ಳುಳ್ಳಿಯನ್ನು ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.  100 ಗ್ರಾಂ ಬೆಳ್ಳುಳ್ಳಿಯಲ್ಲಿ ಸುಮಾರು 33 ಕ್ಯಾಲೋರಿಗಳು, ವಿಟಮಿನ್-ಬಿ6, ವಿಟಮಿನ್-ಸಿ, ಸೋಡಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂಥಹ  ಪೋಷಕಾಂಶಗಳು ಕಂಡುಬರುತ್ತವೆ. ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. 

ಇದನ್ನೂ ಓದಿ : ಬೆಳಗ್ಗೆ ಎದ್ದ ತಕ್ಷಣ ಈ ತರಕಾರಿಯ ನೀರು ಕುಡಿಯಿರಿ ಸಾಕು! ಒಂದೇ ವಾರದಲ್ಲಿ ತೂಕ ಕಡಿಮೆಯಾಗುವುದು ಗ್ಯಾರಂಟಿ

ಬೆಳ್ಳುಳ್ಳಿಯ ಇತರ ಪ್ರಯೋಜನಗಳು : 
1. ವಿಟಮಿನ್ ಸಿಯಲ್ಲಿ ಸಮೃದ್ಧವಾಗಿರುವ ಬೆಳ್ಳುಳ್ಳಿ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
2. ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ತುಂಬಾ ಪ್ರಯೋಜನಕಾರಿ. 
3. ತೂಕ ಇಳಿಸುವಲ್ಲಿಯೂ ಬೆಳ್ಳುಳ್ಳಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. 
4. ಮೂತ್ರದ ಸೋಂಕನ್ನು ತಡೆಗಟ್ಟುವಲ್ಲಿ ಬೆಳ್ಳುಳ್ಳಿ ತುಂಬಾ ಪ್ರಯೋಜನಕಾರಿ. 
5. ಕೆಮ್ಮು ಮತ್ತು ಶೀತದಂತಹ ಸೋಂಕುಗಳನ್ನು ತಡೆಗಟ್ಟುವಲ್ಲಿ ಬೆಳ್ಳುಳ್ಳಿ ರಾಮಬಾಣ. 
6. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಅಂಶವು ನಮ್ಮ ರಕ್ತವನ್ನು ತೆಳುಗೊಳಿಸಲು  ಸಹಾಯ ಮಾಡುತ್ತದೆ. 
7. ಆ್ಯಂಟಿಬಯೋಟಿಕ್ ಗುಣಗಳಿಂದ ಸಮೃದ್ಧವಾಗಿರುವ ಬೆಳ್ಳುಳ್ಳಿ  ಸೀಸನಲ್  ಕಾಯಿಲೆಗಳಿಂದ ರಕ್ಷಿಸುತ್ತದೆ.

ಬೆಳ್ಳುಳ್ಳಿ ಸೇವನೆಯ ವಿಧಾನ ಯಾವುದು? :
ಆಯುರ್ವೇದದ ಪ್ರಕಾರ, ಮಧುಮೇಹ ರೋಗಿಯು ಪ್ರತಿದಿನ ಬೆಳಿಗ್ಗೆ 2-4 ಲವಂಗ ಬೆಳ್ಳುಳ್ಳಿಯನ್ನು ಸೇವಿಸಬೇಕು. ಇದಲ್ಲದೆ, ಪಲ್ಯ, ಸಾಂಬಾರ್ ತಯಾರಿಸುವಾಗ,  ಸ್ವಲ್ಪ ಬೆಳ್ಳುಳ್ಳಿಯನ್ನು ಸೇರಿಸಬಹುದು.

ಇದನ್ನೂ ಓದಿ :  ಈ ಸಣ್ಣ ಕಾಳನ್ನು ಊಟ, ತಿಂಡಿಯ ನಂತರ ಹೀಗೆ ಸೇವಿಸಿ !ತಕ್ಷಣ ಕಂಟ್ರೋಲ್ ಆಗುವುದು ಬ್ಲಡ್ ಶುಗರ್ !

(ಸೂಚನೆ: ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಪರ ವೈದ್ಯಕೀಯ ಸಲಹೆಯಾಗಿ ತೆಗೆದುಕೊಳ್ಳಬಾರದು. ನೀವು ಯಾವುದೇ ಪ್ರಶ್ನೆಗಳನ್ನು ಅಥವಾ ಕಾಳಜಿಗಳನ್ನು ಹೊಂದಿದ್ದರೆ, ವೈದ್ಯರನ್ನು ಸಂಪರ್ಕಿಸಿ. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News