ಈ ಹಣ್ಣಿನ ಎಲೆಯ ಜ್ಯೂಸ್ ಕುಡಿದರೆ ತಕ್ಷಣ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್! ಆದರೆ ಎಷ್ಟು ಜ್ಯೂಸ್ ಕುಡಿಯಬೇಕು ತಿಳಿದುಕೊಳ್ಳಿ !

Tea To Control Blood Sugar:ಕೆಲವು ಮನೆಮದ್ದುಗಳು ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಈ ಮನೆ ಮದ್ದಿನ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು.   

Written by - Ranjitha R K | Last Updated : Jan 8, 2024, 05:06 PM IST
  • ಮಕ್ಕಳೂ ಈ ಮಧುಮೇಹ ಕಾಯಿಲೆಗೆ ಬಲಿಯಾಗುತ್ತಿದ್ದಾರೆ.
  • ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸುವುದು ಕಷ್ಟ
  • ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು ಅಷ್ಟೇ
ಈ ಹಣ್ಣಿನ ಎಲೆಯ ಜ್ಯೂಸ್ ಕುಡಿದರೆ ತಕ್ಷಣ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್! ಆದರೆ ಎಷ್ಟು ಜ್ಯೂಸ್ ಕುಡಿಯಬೇಕು ತಿಳಿದುಕೊಳ್ಳಿ ! title=

Tea To Control Blood Sugar : ಇಂದಿನ ದಿನಗಳಲ್ಲಿ ವೃದ್ಧರು ಮಾತ್ರವಲ್ಲ ಮಕ್ಕಳೂ ಈ ಮಧುಮೇಹ ಕಾಯಿಲೆಗೆ ಬಲಿಯಾಗುತ್ತಿದ್ದಾರೆ.ಈ ಕಾಯಿಲೆ ಒಮ್ಮೆ ಬಂದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸುವುದು ಕಷ್ಟ. ಔಷಧಿಗಳು ಮತ್ತು ಸರಿಯಾದ ಆಹಾರದ ಸಹಾಯದಿಂದ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು ಅಷ್ಟೇ. ಇದಲ್ಲದೆ, ಕೆಲವು ಮನೆಮದ್ದುಗಳು ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಈ ಮನೆ ಮದ್ದಿನ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು. 

ಪೇರಳೆ ಎಲೆಗಳ ಚಹಾದಿಂದ ರಕ್ತದಲ್ಲಿನ ಸಕ್ಕರೆ ನಿಯಂತ್ರಣ : 
ಮಧುಮೇಹ ರೋಗಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಪೇರಳೆ ಎಲೆಯ ಚಹಾವನ್ನು ಕುಡಿಯಬೇಕು. ಪೇರಳೆ ಎಲೆಗಳಲ್ಲಿ ಹಲವಾರು ಔಷಧೀಯ ಗುಣಗಳಿವೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು, ಆ್ಯಂಟಿಮೈಕ್ರೊಬಿಯಲ್, ಆ್ಯಂಟಿ ಇನ್‌ಫ್ಲಮೇಟರಿ ಮತ್ತು ಆ್ಯಂಟಿ ಡಯಾಬಿಟಿಕ್ ಗುಣಗಳಿದ್ದು,ಇದು ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಈ ಚಹಾವನ್ನು ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವೂ ಕಡಿಮೆಯಾಗುತ್ತದೆ.ಇದಲ್ಲದೆ, ಇದು ತೂಕ ನಷ್ಟಕ್ಕೂ ಇದು ಸಹಾಯ ಮಾಡುತ್ತದೆ. ಪೇರಳೆ ಎಲೆಯ ಚಹಾವನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. 

ಇದನ್ನೂ ಓದಿ : ಟೇಸ್ಟಿ ಮತ್ತು ಆರೋಗ್ಯಕರ ಆಹಾರಕ್ಕೆ ಇಲ್ಲಿದೆ ಟಿಪ್ಸ್...

ಪೇರಳೆ ಎಲೆಗಳ ಚಹಾ ತಯಾರಿಸುವ ವಿಧಾನ : 
ಮೊದಲು 8-10 ಪೇರಳೆ ಎಲೆಗಳನ್ನು ತೊಳೆದು ಸ್ವಚ್ಛಗೊಳಿಸಿ. ನಂತರ ಬಾಣಲೆಯಲ್ಲಿ ಒಂದು ಕಪ್ ನೀರು ಮತ್ತು ಪೇರಳೆ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ.ಈ ನೀರು ಕುಡಿದು ಅರ್ಧಕ್ಕೆ ಇಳಿದಾಗ ಅದನ್ನು ಫಿಲ್ಟರ್ ಮಾಡಿ ಸೇವಿಸಿ.

ಈ ಜ್ಯೂಸ್ ಅನ್ನು ಯಾವಾಗ ಸೇವಿಸಬೇಕು?:
ಊಟದ ನಂತರ ಪೇರಳೆ ಎಲೆಯ ಚಹಾವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣದಲ್ಲಿ ಇರುತ್ತದೆ. ಇದಲ್ಲದೆ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೂಡಾ ಈ ಚಹಾವನ್ನು ಸೇವಿಸಬಹುದು.

ಇದನ್ನೂ ಓದಿ : ಕುಂಬಳಕಾಯಿ ಅಲ್ಲ, ಅದರ ಬೀಜ ಸೇವಿಸಿ : ಈ ರೋಗಗಳಿಂದ ಸಿಗುವುದು ಶಾಶ್ವತ ಪರಿಹಾರ

ಪೇರಳೆ ಎಲೆಯ ಚಹಾವನ್ನು ಕುಡಿಯುವ ಇತರ ಪ್ರಯೋಜನಗಳು :
-ಪೇರಳೆ ಎಲೆಯ ಚಹಾವನ್ನು ಸೇವಿಸುವುದರಿಂದ ಹೆಚ್ಚಿದ ದೇಹದ ತೂಕವನ್ನು ನಿಯಂತ್ರಿಸಬಹುದು.
-ಹಲ್ಲುನೋವು ನಿವಾರಣೆಯಾಗುತ್ತದೆ. 
-ಪೇರಳೆ ಎಲೆಗಳ ಟೀ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. ಇದನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
- ಈ ಚಹಾವನ್ನು ಸೇವಿಸುವುದರಿಂದ ಕೆಮ್ಮು ಮತ್ತು  ಗಂಟಲು ನೋವಿನಿಂದಲೂ ಮುಕ್ತಿ ಸಿಗುತ್ತದೆ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಂಶೋಧನೆಯ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News