ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ: ಸಿಎಂ ಸಿದ್ದರಾಮಯ್ಯ

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು. 

Written by - Yashaswini V | Last Updated : May 20, 2024, 01:48 PM IST
  • ಬಿ‌ವೈ ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ.
  • ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ.
  • ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು.
ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ: ಸಿಎಂ ಸಿದ್ದರಾಮಯ್ಯ  title=

ಬೆಂಗಳೂರು: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. 

ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮೀಟ್ ದ ಪ್ರೆಸ್ ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಬಿ‌ವೈ ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್ ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. 

ನೀರಾವರಿಗೆ 16360 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. 

ಇದನ್ನೂ ಓದಿ- ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಬಿಡಿ ಅದು ಐದು ವರ್ಷ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ಲೋಕೋಪಯೋಗಿ ಇಲಾಖೆಗೂ (Public Works Department) 9661 ಕೋಟಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲಾ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು. 

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು. 

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು ಎಂದರು.  

ಇದನ್ನೂ ಓದಿ- ನಮ್ಮಲ್ಲಿ ಒಳಜಗಳ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲೀಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿದೆ. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದರು. 

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದರು. 

ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ವಿವರಿಸಿದರು. 

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ವಿವರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News