Lok Sabha Election 2024: "ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು"

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ತಿರುಗೇಟು ಕೊಟ್ಟ ಅವರು; ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು  ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.

Written by - Prashobh Devanahalli | Edited by - Manjunath Naragund | Last Updated : Apr 11, 2024, 06:45 PM IST
  • ನಾನು ಲೆಕ್ಕಕ್ಕೆ ಇಲ್ಲವಾ? ಸರಿಸಾಟಿ ಅಲ್ಲವಾ? ಜನರೇ ತೀರ್ಮಾನ ಮಾಡುತ್ತಾರೆ
  • ಡಿಕೆಶಿ ದರ್ಪದ ಮಾತಿಗೆ ವಿನಮ್ರತೆಯಿಂದ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
Lok Sabha Election 2024: "ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು" title=

ಅರಕಲಗೂಡು:  ಅವರು ಏನೋ ಐ ಆಮ್  ಸ್ಟ್ರೈಟ್ ಫೈಟರ್ ಎಂದು ಹೇಳಿದಾರೆ. ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್ ಅಂತ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ  ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ತಿರುಗೇಟು ಕೊಟ್ಟ ಅವರು; ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು  ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.

ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ. ಕುಮಾರಸ್ವಾಮಿ ನನಗೆ ಡೋಂಟ್ ಕೇರ್ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟಿಕೋ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ. ಆರೂವರೆ ಕೋಟಿ ಜನ ಕುಮಾರಸ್ವಾಮಿ ಅವಶ್ಯಕತೆ ಇದೆಯೊ ಇಲ್ಲವೊ ಎಂದು ತೀರ್ಮಾನ ಮಾಡುತ್ತಾರೆ.

ಕೊತ್ಚಾಲ್ ರಾಮಚಂದ್ರನ ಗರಡಿಯಲ್ಲಿ ಬಂದಿರುವವರು ನೀವು. ನೀವು ಸ್ಟ್ರೈಟ್ ಫೈಟರ್ ಆಗಿದ್ದರೆ ವಿಧಾನಸೌಧದಲ್ಲಿ ಪೈಟ್ ಮಾಡ್ತೀರಾ. ನೀವು ಬಂದಿರುವ ಹಿನ್ನೆಲೆ ಅಂತದ್ದೇ ಅಲ್ಲವೇ? ನಿಮ್ಮ‌ಮದ ಇದೆಯಲ್ಲ, ಅದನ್ನು ಇಳಿಸುವ ಕಾಲ ಸನಿಹಕ್ಕೆ ಬಂದಿದೆ ಎಂದು ಅವರು ಕಿಡಿಕಾರಿದರು.

ಅವನ್ಯಾರೋ ಹೇಳುತ್ತಾನೆ, ನನ್ನ ಆದಾಯ ಆಲೂಗಡ್ಡೆ ಬೆಳೆದು ಬಂದಿದ್ದು ಎಂದು. ಬಂದು ನನ್ನ ತೋಟ ನೋಡಪ್ಪ ಮಹಾನುಭಾವ.. ನಾನು ಇನ್ನೊಬ್ಬರ ಥರ ಸರಕಾರದ ಜಾಗಕ್ಕೆ ಬೇಲಿ ಹಾಕಿ ಸಂಪಾದನೆ ಮಾಡಿಲ್ಲ. ಕಷ್ಟಪಟ್ಟು ಅಸ್ತಿ ಸಂಪಾದನೆ ಮಾಡಿದ್ದೇವೆ ಎಂದು ಅವರು ತಿರುಗೇಟು ಕೊಟ್ಟರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

.

 

Trending News