ರಿಜಾಯ್ಸ್ ಹೆಲ್ತ್ ಫೌಂಡೇಶನ್ ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರ ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವಯುತ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಎನ್ಆರ್ಐ ಉತ್ಸವದ ಭಾಗವಾಗಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ.
ಚಂದ್ರಕಾಂತ್ ಆರ್ಯ. ಇತ್ತೀಚೆಗೆ ಕೆನಡಾ ಸಂಸತ್ನಲ್ಲಿ ಕನ್ನಡದ ಕಂಪನ್ನು ಪಸರಿಸಿ, ಕನ್ನಡದಲ್ಲೇ ಭಾಷಣ ಮಾಡಿ ಕನ್ನಡಿಗರ ಮನೆಗೆದ್ದಿದ್ದರು. ಇವರ ಬಗ್ಗೆ ಜೀ ಕನ್ನಡ ಸುದ್ದಿ ಮಾಧ್ಯಮ ಒಂದಿಷ್ಟು ಮಾಹಿತಿಯನ್ನು ನಿಮಗೆ ನೀಡಲು ಮುಂದಾಗಿದೆ.
ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವದ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. "ನಾನು ಕೆನಡಾದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ (ಪ್ರಥಮ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಪ್ರಪಂಚದ ಯಾವುದೇ ಸಂಸತ್ತಿನಲ್ಲಿ ಕನ್ನಡವನ್ನು ಮಾತನಾಡುವುದು ಇದೇ ಮೊದಲು" ಎಂದು ಕೆನಡಾ ಸಂಸದ ಚಂದ್ರ ಆರ್ಯ ಟ್ವೀಟ್ ಮಾಡಿದ್ದಾರೆ.
ಐದು ಗೀತೆಗಳ ಧ್ವನಿ ಮುದ್ರಣವನ್ನು ಮೇ 6 ಮತ್ತು7ರಂದು ಎಸ್ಪಿ ಸ್ಟುಡಿಯೋ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಈ ಗೀತೆಗಳನ್ನು ಉದಯೋನ್ಮುಖ ಗಾಯಕ, ಗಾಯಕಿಯರಾದ ಅಂಕಿತಾ ಕುಂಡು, ಸಮೀರ ಸುದರ್ಶನ್, ಅನಿರುದ್ಧ್ ಪ್ರಭು , ಸುಬ್ರಹ್ಮಣಿ , ನವ್ಯಾ ಪ್ರಶಾಂತ್ ಹಾಡಿದ್ದಾರೆ. ಈ ಚಿತ್ರ ಮುಂದಿನ ವರ್ಷ ತೆರೆ ಮೇಲೆ ಬರಲಿದೆ.
ಆಕಾಶ್ ಅವರು 2 ವರ್ಷದವರಾಗಿದ್ದಾಗ ಮೊದಲ ಬಾರಿಗೆ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 3 ನೇ ವಯಸ್ಸಿನಲ್ಲಿ ಅಮೇರಿಕನ್ ಮೆನ್ಸಾಗೆ ಸೇರ್ಪಡೆಗೊಂಡ ಅವರು, 5 ನೇ ವಯಸ್ಸಿನಲ್ಲಿ ಡೇವಿಡ್ಸನ್ ಯಂಗ್ ಸ್ಕಾಲರ್ ಆಗಿ ಹೊರಹೊಮ್ಮಿದರು. ಬಳಿಕ ತಮ್ಮ 6ನೇ ವಯಸ್ಸಿನಲ್ಲಿ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲ್ಲಿಂಗ್ ಬೀನಲ್ಲಿ ಭಾಗವಹಿಸಿದ್ದರು.
ಇನ್ನು ಎನ್ಆರ್ಐಗಳಿಗಾಗಿಯೇ ಕರ್ನಾಟಕದಲ್ಲಿ ಕೆಲವೊಂದು ನೀತಿಗಳನ್ನು ಜಾರಿಗೊಳಿಸಲಾಗಿತ್ತು. ಈ ನೀತಿಗಳಿಂದ ಅನಿವಾಸಿ ಕನ್ನಡಿಗರು ಮತ್ತು ರಾಜ್ಯದ ನಡುವಿನ ಬಾಂಧವ್ಯ ಗಟ್ಟಿಗೊಳ್ಳುತ್ತದೆ ಎಂದು ನಂಬಲಾಗಿತ್ತು. ಆದರೆ ಕರ್ನಾಟಕದ ಎನ್ಆರ್ಐ ಕಮಿಟಿಯು ಸದ್ಯ ಕಾರ್ಯ ನಿರ್ವಹಿಸುತ್ತಿಲ್ಲ.
ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಬಿಡುಗಡೆಯಾದಾಗಿನಿಂದ, ಇದು ಹಲವಾರು ದಾಖಲೆಗಳನ್ನು ಮುರಿದು ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಾ ಸಾಗುತ್ತಿದೆ.ಈಗ ಈ ಚಿತ್ರ ಬಿಡುಗಡೆಯಾಗಿ ಸುಮಾರು 26 ದಿನಗಳಾಗುತ್ತಾ ಬಂದಿದ್ದರೂ ಸಹ ಅದರ ಹವಾ ಮಾತ್ರ ಇನ್ನೂ ಕಡಿಮೆಯಾಗಿಲ್ಲ.
ಒಡಿಶಾದಲ್ಲಿ ಏಪ್ರಿಲ್ 1ರಂದು ಸಂಸ್ಥಾಪನಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕತಾರ್ನಲ್ಲಿ ನೆಲೆಸಿರುವ ಉತ್ಕಲಿಕಾ ಕತಾರ್ ಸಮುದಾಯದ ಸದಸ್ಯರು ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಒಡಿಶಾ ಸಂಸ್ಥಾಪನಾ ದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.
ಓಮಿಕ್ರಾನ್ನ ಹೊಸ ರೂಪಾಂತರಗಳು ಪ್ರತಿಕಾಯಗಳನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಆದರೆ, ಲಸಿಕೆ ಹಾಕಿಸಿಕೊಂಡವರಲ್ಲಿ ಐದು ಪಟ್ಟು ಹೆಚ್ಚು ರೋಗನಿರೋಧಕ ಶಕ್ತಿ ಇರಲಿದೆ ಎಂದು ವಿಜ್ಞಾನಿಗಳು ಹೇಳಿರುವ ಸಂಗತಿ ಸಮಾಧಾನಕರ ಸಂಗತಿ ಎಂದೇ ಹೇಳಬಹುದು
Indian Students Return to China: ಚೀನಾಗೆ ತೆರಳಲು ಬಯಸುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಭಾರಿ ನೆಮ್ಮೆದಿಯ ಸುದ್ದಿಯೊಂದು ಪ್ರಕಟವಾಗಿದೆ. ಇದರಿಂದ ಸುಮಾರು 20 ರಿಂದ 22 ಸಾವಿರ ವಿದ್ಯಾರ್ಥಿಗಳು ತಮ್ಮ ಮುಂದಿನ ಅಧ್ಯಯನಕ್ಕಾಗಿ ಚೀನಾಕ್ಕೆ ತೆರಳಲು ಸಾಧ್ಯವಾಗಲಿದೆ.
ಸ್ಯಾನ್ ಫ್ರಾನ್ಸಿಸ್ಕೊನ ಕಣಿವೆ ಪ್ರದೇಶದಲ್ಲಿರುವ ಸಿಲಿಕಾನ್ ವ್ಯಾಲಿಯಲ್ಲಿರುವ ಭಾರತೀಯ ಸಮುದಾಯದ ಜನರನ್ನುದ್ದೇಶಿಸಿ ಮಾತನಾಡಿರುವ ನಿರ್ಮಲಾ ಸೀತಾರಾಮನ್, ನಾವಿನ್ಯತೆ ಹಾಗೂ ಸಂಶೋಧನೆಗೆ ಭಾರತೀಯರು ನೀಡಿದ ಕೊಡುಗೆಯನ್ನು ಎತ್ತಿಹಿಡಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.