ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
CM Siddaramaiah: ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.
ಕುಡತಿನಿ ಬಳಿ 361 ದಿನಗಳಿಂದ ಪ್ರತಿಭಟನಾ ನಿರತ ಭೂ ಸಂತ್ರಸ್ತರ ಹೋರಾಟದ ಕುರಿತ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಸ್ ಅವರು ಸುವರ್ಣಸೌಧದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಂದಿಸಿ, ಡಿಸೆಂಬರ್ 14ರ ಗುರುವಾರ ಮಧ್ಯಾಹ್ನ 3.30ಕ್ಕೆ ಕೊಠಡಿ ಸಂಖ್ಯೆ 315 ರಲ್ಲಿ ವಿಶೇಷ ಸಭೆ ಕರೆದಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ.
Siddaramaiah: ತ್ಯಾಗ ಮತ್ತು ಬಲಿದಾನಗಳ ಮೂಲಕ ಕನ್ನಡ ನಾಡು ರಚನೆಯಾಗಿದ್ದು ಇದಕ್ಕೆ ಕಾರಣರಾದ ಎಲ್ಲರನ್ನೂ ಸ್ಮರಿಸುತ್ತೇನೆ. ಕನ್ನಡ ನೆಲ-ಜಲ-ಭಾಷೆ-ಗಡಿ ರಕ್ಷಣೆಗೆ ನಾವು ಬದ್ಧರಾಗಿರುವುದೇ, ಕನ್ನಡ ವಾತಾವರಣ ನಿರ್ಮಾಣ ಮಾಡಿ ಇದನ್ನು ವಿಸ್ತರಿಸುವುದೇ ತ್ಯಾಗ ಬಲಿದಾನಗೈದ ಎಲ್ಲರಿಗೂ ನಾವು ಕೊಡುವ ಗೌರವ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.