BYJU's Crisis: EGMನ್ನು ಕರೆದಿದ್ದ ಷೇರುದಾರರು ಬೈಜುಸ್ನಲ್ಲಿ ಶೇ.30ಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿದ್ದಾರೆ. ರವೀಂದ್ರನ್ ಮತ್ತು ಅವರ ಕುಟುಂಬದವರು ಕಂಪನಿಯಲ್ಲಿ ಸುಮಾರು ಶೇ.26ರಷ್ಟು ಪಾಲನ್ನು ಹೊಂದಿದ್ದಾರೆ.
Shri Guru Raghavendra Bank scandal: ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಯಿಂದ ಸಾವಿರಾರು ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು.
Ranbir Kapoor: ಛತ್ತೀಸ್ಗಢ ಮತ್ತು ದುಬೈನಿಂದ ನಡೆಯುತ್ತಿರುವ ಕೋಟ್ಯಂತರ ಮೌಲ್ಯದ ಅಕ್ರಮ ಬೆಟ್ಟಿಂಗ್ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ. ಬಾಲಿವುಡ್’ಗೆ ಸಂಬಂಧಿಸಿದ ಅನೇಕ ಸೆಲೆಬ್ರಿಟಿಗಳು ಈ ಅಕ್ರಮ ಬೆಟ್ಟಿಂಗ್ ಅನ್ನು ಉತ್ತೇಜಿಸುತ್ತಿದ್ದಾರೆ ಎಂದು ಅನುಮಾನಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
Online Betting Fraud: ಈ ನಕಲಿ ಕಂಪನಿಗಳು ಬೆಟ್ಟಿಂಗ್ ಮತ್ತು ಜೂಜಾಟದ ನೆಪದಲ್ಲಿ ಹಣ ಸಂಗ್ರಹಿಸಿ ವಂಚನೆ ಚಟುವಟಿಕೆಗಳಲ್ಲಿ ತೊಡಗಿದ್ದವು. ಆರೋಪಿಗಳು ಬೆಸ್ಟಾರ್ಟೆಕ್, ಖೆಲೋ24ಬೆಟ್ ಮುಂತಾದ ವೆಬ್ಸೈಟ್ಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದರು.
Delhi Excise Scam Update: ದೆಹಲಿಯ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿಯಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಇಡಿ ಅವರ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರಲ್ಲದೆ, ವಿಜಯ್ ನಾಯರ್, ಸಮೀರ್ ಮಹೇಂದ್ರು, ಅಮಿತ್ ಅರೋರಾ ಮತ್ತು ಅರುಣ್ ಪಿಳ್ಳೈ ಸೇರಿದಂತೆ ಇತರರ ಹೆಸರುಗಳು ಶಾಮಿಲಾಗಿವೆ.
Money Laundering Case: ಪ್ರಕರಣದಲ್ಲಿ ನಡೆದ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಆರೋಪಿಯ ಕಸ್ಟಡಿ ವಿಚಾರಣೆಯಅವಶ್ಯಕತೆ ಇದೆ ಎಂದು ಕೇಂದ್ರೀಯ ಸಂಸ್ಥೆ ತನ್ನ ಅರ್ಜಿಯಲ್ಲಿ ವಾದಿಸಿತ್ತು. ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ನಡೆದ ಮೂರನೇ ಸುತ್ತಿನ ವಿಚಾರಣೆಯ ಬಳಿಕ ಮಂಗಳವಾರ ರಾತ್ರಿ ಆರ್.ಕೆ ಆರೋರಾ ಅವರನ್ನು ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿ ಬಂಧಿಸಲಾಗಿದೆ.
Ed Searches Multiple Locations: ಮದ್ಯ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತಂಡ ಬೆಂಗಳೂರು, ಹೈದರಾಬಾದ್, ನೆಲ್ಲೂರು, ಚೆನ್ನೈ ಸೇರಿದಂತೆ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.
ನಟಿ ಜಾಕ್ವೆಲಿನ್ ಫರ್ನಾಂಡೀಸ್ಗಾಗಿ ವಂಚಕ ಸುಖೇಶ್ ಚಂದ್ರಶೇಖರ್ ಅವರು ಶ್ರೀಲಂಕಾದಲ್ಲಿ ಮನೆಯೊಂದನ್ನು ಖರೀದಿಸಿದ್ದರು ಮತ್ತು ಅವರಿಗಾಗಿ ಮುಂಬೈನ ಉನ್ನತ ಮಟ್ಟದ ಜುಹು ಪ್ರದೇಶದಲ್ಲಿ ಬಂಗಲೆಗಾಗಿ ಮುಂಗಡವನ್ನು ನೀಡಿದ್ದರು ಎಂದು ಜಾರಿ ನಿರ್ದೇಶನಾಲಯದ ಚಾರ್ಜ್ಶೀಟ್ ಉಲ್ಲೇಖಿಸಿದೆ.
ಇನ್ನು ಏಕನಾಥ್ ಶಿಂಧೆ ಬಣದ ಪರವಾಗಿ ವಕೀಲ ನೀರಜ್ ಕಿಶನ್ ಕೌಲ್ ವಾದ ಮಂಡನೆ ಮಾಡಿದ್ದಾರೆ. "ಗುವಾಹಟಿಯಿಂದ ಮೃತ ದೇಹಗಳು ಹಿಂತಿರುಗುತ್ತವೆ" ಎಂದು ಸಂಜಯ್ ರಾವತ್ ಹೇಳುತ್ತಿದ್ದಾರೆ ಎಂದು ಕೌಲ್ ಕೋರ್ಟ್ಗೆ ತಿಳಿಸಿದ್ದಾರೆ.
ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಕರೆದಿದೆ. ಇದಲ್ಲದೇ ರಾವತ್ ಕುಟುಂಬದ ಇತರ ಸದಸ್ಯರನ್ನೂ ವಿಚಾರಣೆ ನಡೆಸಲಾಗುತ್ತಿದೆ.
ಇಡಿ ಇಕ್ಕಳದಲ್ಲಿ ಸಿಲಿಕೊಕೊಂಡಿರೊ ರಾಷ್ಟ್ರ ನಾಯಕ ರಾಹುಲ್ ಗಾಂಧಿಗೆ ಮೂರನೇ ದಿನವೂ ಜಾರಿ ನಿರ್ದೇಶನಾಲಯ ಫುಲ್ ಡ್ರಿಲ್ ನಡೆಸಿದೆ. ಅತ್ತ ರಾಹುಲ್ ಗಾಂಧಿ ಇಡಿ ವಿಚಾರಣೆ ಎದುರಿಸುತ್ತಿದ್ರೆ, ಇತ್ತ ಕಾಂಗ್ರೆಸ್ ನಾಯಕರು ರಾಷ್ಟ್ರ ರಾಜ್ಯಧಾನಿಯಲ್ಲಿ ಮತ್ತೆ ದೊಡ್ಡ ಹೈಡ್ರಾಮವೇ ಸೃಷ್ಟಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಲಿದ್ದು, ಇಂದು ಕಚೇರಿಗೆ ಭೇಟಿ ನೀಡಿದ್ದಾರೆ. ಮೂವರು ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಿಎಂಎಲ್ಎ ಸೆಕ್ಷನ್ 50ರ ಅಡಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ. ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗೆ ರಾಹುಲ್ರಿಂದ ಲಿಖಿತ ಉತ್ತರ ಪಡೆಯಲಾಗುತ್ತದೆ.
ನ್ಯಾಷನಲ್ ಹೆರಾಲ್ಡ್-ಎಜೆಎಲ್ ಡೀಲ್ಗೆ ಸಂಬಂಧಿಸಿದಂತೆ ಸೋಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.