Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
Lok Sabha Election 2024: 58,000+ ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.
Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Minister MB Patil: ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ನಮ್ಮ ಕರ್ತವ್ಯ. ಜನರು ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ ಪರವಾಗಿ ಸ್ಪಂದಿಸುತ್ತಿದ್ದಾರೆ. ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ ಮುಂತಾದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮೋದಿಯವರ 10 ವರ್ಷಗಳ ಆಡಳಿತ ಜನರಿಗೆ ಸಾಕಾಗಿ ಹೋಗಿದೆ- ಸಚಿವ ಎಂ.ಬಿ. ಪಾಟೀಲ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿದ್ದ ಚುನಾವಣಾ ಕಾರ್ಯಗಾರದ ಸಂದರ್ಭದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಮಾಜಿ ಸಂಸದ ತೇಜಸ್ವಿ ಸೂರ್ಯ ಅವರು ಪಕ್ಷದ ಕಾರ್ಯಕರ್ತರ ಸಹಾಯದಿಂದ ಅಲ್ಲಿಂದ ಪಲಾಯನ ಮಾಡಿದ್ದಾರೆ.
ಬಿಜೆಪಿಯಲ್ಲಿ ಸಂಗಣ್ಣರಿಗೆ ಅವಕಾಶ ಕೊಟ್ಟಿದ್ರೆ ಗೆಲ್ಲುತ್ತಿದ್ರು
ಬಿಜೆಪಿ ನಾಯಕರಿಗೆ ವಿನಾಶಕಾಲೇ ವಿಪರೀತ ಬುದ್ಧಿ ಇದೆ
ಕೊಪ್ಪಳದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
ಕುಮಾರಸ್ವಾಮಿ ಬಂದ್ರೂ ಬಿಜೆಪಿ ವಿನಾಶದ ಅಂಚಿನಲ್ಲಿದೆ
ನಾನು ಯಾರನ್ನೂ ಹೆದರಿಸಲ್ಲ, ಯಾರನ್ನೂ ಓಡಿಸಲ್ಲ
ಭಾರತ ವಿಕಸಕ್ಕೆ ಮಹತ್ವದ ನಿರ್ಧಾರ ಕೈಗೊಳ್ಳುತ್ತೇನೆ
ದೊಡ್ಡ ಯೋಜನೆಗಳ ಬಗ್ಗೆ ಭಯ ಬೇಡ ಎಂದ ಮೋದಿ
ಇ.ಡಿ, ಐಟಿ ದುರ್ಬಳಕೆ ಪ್ರಶ್ನೆಯೇ ಇಲ್ಲ- ಪ್ರಧಾನಿ
2047ಕ್ಕೆ ಭಾರತ ವಿಕಸಿತ ದೇಶ ಆಗಲು ಹಲವು ಕ್ರಮ
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌಂಟ್ ಡೌನ್
ಮತದಾರರಿಗೆ ತಮ್ಮ ಮತಗಟ್ಟೆ ಹುಡುಕಲು QR ಕೋಡ್
ಮನೆ ಮನೆಗೆ ಹಂಚುವ ಓಟರ್ ಸ್ಲಿಪ್ಗಳಲ್ಲಿ QR Code
QR ಸ್ಕ್ಯಾನ್ ಮಾಡಿ ಮತಗಟ್ಟೆ ತಲುಪಲು ವ್ಯವಸ್ಥೆ
ದೇಶದಲ್ಲಿ ಮೊದಲ ಪ್ರಯೋಗ ಮಾಡಿದ ಚುನಾವಣೆ ಆಯೋಗ
ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲಾ ಸಂಸ್ಥೆಗಳಿಗೂ ಮತದಾನದ ದಿನವಾದ ಏಪ್ರಿಲ್ 26ರಂದು ರಜೆ ನೀಡಿ ಎಲ್ಲಾ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜೊತೆಗೆ ಎಲ್ಲಾ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ ಎಂದು ತುಷಾರ್ ಗಿರಿ ನಾಥ್ ಹೇಳಿದರು.
Lok Sabha election 2024: ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆ, ಬಿಸಿಲ ನಗರಿ, ಎಡೆದೊರೆ ನಾಡು, ಹತ್ತಿ ಕಣಜ ಅಂತೆಲ್ಲಾ ಕರೆಯುವ ರಾಯಚೂರು ಜಿಲ್ಲೆಯಲ್ಲಿ ಬಹುಭಾಷಿಗರನ್ನು ಒಡಲಲ್ಲಿಟ್ಟುಕೊಂಡು ಪೋಷಿಸುತ್ತಿದೆ. ಬೇಸಿಗೆಕಾಲದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದ್ರೆ 45 ಡಿಗ್ರಿ ಉಷ್ಣತೆಯಲ್ಲಿ ಇಲ್ಲಿ ಜನರು ಬದುಕುತ್ತಾರೆ.
Lok Sabha Election 2024: ಈ ಕುರಿತಾಗಿ ಅವರನ್ನು ಉಲ್ಲೇಖಿಸಿ ಹಂಚಿಕೊಂಡಿರುವ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ "ಸನ್ಮಾನ್ಯ ಹೆಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ಗೆ ದುಡ್ಡೇ ದೊಡ್ಡಪ್ಪ.. ಮೋದಿಗೆ ದುಡಿಮೆಯೇ ದೊಡ್ಡಪ್ಪ
ರಾಜ್ಯದಲ್ಲಿ ದರಿದ್ರ ಸರ್ಕಾರ ಇದೆ.. ಕುಡಿಯುವ ನೀರಿಗೂ ಹಾಹಾಕಾರ
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ಭಾಷಣದುದ್ದಕ್ಕೂ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಸಿಎಂ
ಈ ಬಾರಿ ಬಿಜೆಪಿಗೆ ಮತ ನೀಡುವಂತೆ ಹಾವೇರಿಯಲ್ಲಿ ಮನವಿ
Lok Sabha Election 2024: ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಒಂದು ಲಕ್ಷ ಎಕರೆ ನೀರಾವರಿ ಮಾಡಿರುವುದು ಸಾಮಾನ್ಯ ಮಾತಲ್ಲ. ಇದರಿಂದ ಹಾನಗಲ್, ಹಿರೆಕೆರೂರು, ರಾಣೆಬೆನ್ನೂರು ತಾಲೂಕುಗಳಲ್ಲಿ ನೀರಾವರಿಯಾಗಿದೆ. ಈ ಕೆಲಸ ಸಾಧ್ಯವಿಲ್ಲ ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದೇನೆ.ಶಿಗ್ಗಾಂವಿ ಕ್ಷೇತ್ರ ಬಿಟ್ಟು ಎಂಟು ಏತ ನೀರಾವರಿ ಯೋಜನೆ ಮಾಡಿದ್ದೇನೆ ಎಂದರು.
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.