Supreme Court Judgement On NEET - ವೈದ್ಯಕೀಯ (Medical) ಓದಲು ಮಾಡಲು ಬಯಸುವ ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈಗ NEET ನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಬಿಡಿಎಸ್ (BDS)ಗೆ ಸೇರುವ ಮೂಲಕ ತಮ್ಮ ಕನಸನ್ನು ಈಡೇರಿಸಿಕೊಳ್ಳಬಹುದು
ರಮೇಶ್ ಪೋಖರಿಯಲ್ ನಿಶಾಂಕ್ ನೇತೃತ್ವದ ಸಚಿವಾಲಯವು (Ramesh Pokhariyal Nishank) JEE ಪರೀಕ್ಷೆಯನ್ನು ವರ್ಷಕ್ಕೆ ನಾಲ್ಕು ಬಾರಿ ನಡೆಸಲು ನಿರ್ಧರಿಸಿದೆ. ಪರೀಕ್ಷೆಗಳನ್ನು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತಿತ್ತು ಎಂಬುದು ಗಮನಾರ್ಹ.
ಕೊರೊನಾವೈರಸ್ ಸಾಂಕ್ರಾಮಿಕವು ಶಿಕ್ಷಣ ಪ್ರಪಂಚದ ಮೇಲೆ ತೀವ್ರ ಪರಿಣಾಮ ಬೀರಿದೆ. ಶಾಲಾ-ಕಾಲೇಜು ಪರೀಕ್ಷೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳವರೆಗೆ ಎಲ್ಲವನ್ನೂ ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ಮುಂದೂಡಲಾಯಿತು.
ನೀಟ್-ಯುಜಿ ಮತ್ತು ಜೆಇಇ ಪರೀಕ್ಷೆ ವಿಚಾರವಾಗಿ ನಡೆಸಲು ಸುಪ್ರೀಂಕೋರ್ಟ್ ನ ಆಗಸ್ಟ್ 17 ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಪ್ರತಿಪಕ್ಷ ಆಡಳಿತದ ಆರು ರಾಜ್ಯಗಳ ಮಂತ್ರಿಗಳು ಸಲ್ಲಿಸಿದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ಕನ್ನಡಿಗರೂ ಆದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ನೇ ತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್ ಕಚೇರಿಯಿಂದ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಾಲ್ಅ ವರ ಮನೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು.
ದೇಶಾದ್ಯಂತದ ವಿದ್ಯಾರ್ಥಿಗಳು, ಅವರ ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಜಗತ್ತಿಗೆ ಸಂಬಂಧಿಸಿದವರೆಲ್ಲರೂ ಅಂತಿಮ ವರ್ಷದ ಪರೀಕ್ಷೆಗಳ ಬಗ್ಗೆ ಸಾಕಷ್ಟು ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಅಂತಿಮ ವರ್ಷದ ಪರೀಕ್ಷೆಗಳನ್ನು ಸೆಪ್ಟೆಂಬರ್ನಲ್ಲಿ ನಡೆಸಲಾಗುತ್ತದೆಯೋ? ಇಲ್ಲವೋ? ಎಂಬುದರ ಬಗ್ಗೆ ಸಾಕಷ್ಟು ಗೊಂದಲಗಳಿವೆ.
COVID-19 ವೈರಸ್ ಇರುವ ಕಾರಣಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ಮುಂದೂಡುವಂತೆ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳಾದ ಜೆಇಇ-ಮೇನ್ಸ್ ಮತ್ತು ನೀಟ್ ಪ್ರವೇಶಾತಿ ಕಾರ್ಡ್ಗಳನ್ನು ಈಗಾಗಲೇ 14 ಲಕ್ಷ ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿದ್ದಾರೆ. ಹೆಚ್ಚುತ್ತಿರುವ COVID-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಎರಡು ಪರೀಕ್ಷೆಗಳನ್ನು ಮುಂದೂಡಬೇಕೆಂಬ ಕೂಗು ಹೆಚ್ಚುತ್ತಿರುವ ಮಧ್ಯೆ ಎನ್ಟಿಎ ಬುಧವಾರ ನೀಟ್ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿತು. ಜೆಇಇ-ಮೇನ್ಸ್ ಪರೀಕ್ಷೆಯು ಸೆಪ್ಟೆಂಬರ್ 1-6 ರಿಂದ ನಡೆಯಲಿದ್ದು, ನೀಟ್-ಯುಜಿ ಸೆಪ್ಟೆಂಬರ್ 13ಕ್ಕೆ ನಿಗದಿಯಾಗಿದೆ.
ಬಾಕಿ ಉಳಿದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪಾಲು, ಮತ್ತು ನೀಟ್ ಮತ್ತು ಜೆಇಇ ಪರೀಕ್ಷೆಯ ಸಮಸ್ಯೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯ ಅಧ್ಯಕ್ಷತೆಯನ್ನು ಸೋನಿಯಾ ಗಾಂಧಿ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕೊರೊನಾವೈರಸ್ ಪ್ರಕೋಪದ ಹಿನ್ನೆಲೆಯಲ್ಲಿ ಐಐಟಿ-ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಐಐಟಿ-ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಪರಿಹಾರವನ್ನು ನೀಡಿದ್ದು JEE, NEET, UGC NET, IGNOU OPENMAT, PhD, JNUEE, ICAR NET, CSIR- UGC NET ಮತ್ತು AIAPGET ಪೇಪರ್ ಅರ್ಜಿ ನಮೂನೆಗಾಗಿ ಪರಿಷ್ಕರಣೆ ದಿನಾಂಕವನ್ನು ವಿಸ್ತರಿಸಿದೆ.
ಭಾರತದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲಕ್ಕೆ ಇಂಥ ಕಾರ್ಯಕ್ರಮ ರೂಪಿಸಲಾಗಿದ್ದು, ರಾಜ್ಯದ ಒಟ್ಟು 1. 94 ಲಕ್ಷ ವಿದ್ಯಾರ್ಥಿಗಳು ವಿಶೇಷವಾಗಿ ಬಡ ವಿದ್ಯಾರ್ಥಿಗಳು ಇದರ ಲಾಭ ಪಡೆಯಬಹುದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.