ರಾಜ್ಯದಲ್ಲಿ ಅಭಿವೃದ್ಧಿಯ ಪರ್ವವನ್ನು ಸೃಷ್ಟಿ ಮಾಡಲಿದೆ ಎಂಬ ದೃಢ ವಿಶ್ವಾಸವಿದೆ. ವರ್ಷದಲ್ಲಿ ಕೋಟ್ಯಂತರ ಜನರ ಹರ್ಷಕ್ಕೆ ಕಾರಣವಾದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುರ್ಜೆವಾಲಾ ಹೇಳಿದ್ದಾರೆ.
Lok Sabha Election 2024: ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ಪರವಾಗಿ ಸ್ವಾಗತ ಕೋರುತ್ತೇನೆ ಎಂದು ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನ್ನು ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಸಿದ್ದು, ಇಂದು 5ನೇ ಗ್ಯಾರಂಟಿ ಯೋಜನೆ ಯುವ ನಿಧಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯನ್ನು ಇಂದು ಜಾರಿಗೊಳಿಸಲಾಗಿದ್ದು, ಈ ಯೋಜನೆಯಲ್ಲಿ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಡಿಪ್ಲೊಮಾ ಪದವೀಧರರ ಖಾತೆಗೆ ಮಾಸಿಕ 1,500 ರೂಪಾಯಿ ನೀಡಲಾಗುವುದು.
ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿದ್ದು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಈಗಲೂ ನನಗೇ ಸಿದ್ದರಾಮಯ್ಯನೇ ಸಿಎಂ ಎನ್ನುವ ಮೂಲಕ ಗಮನ ಸೆಳೆದಿದ್ದರು. ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು. ಸಿದ್ದರಾಮಯ್ಯ ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಎಂಥಲೇ ಹೇಳಲಾಗುತ್ತಿದೆ.
Karnataka CM decision Live Updates: ‘ನಾನು ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್, ನಾನು ಧೈರ್ಯದಲ್ಲಿ ಮತ್ತು ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ 5 ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ, ನಾನು ಸಿಂಗಲ್ ಮ್ಯಾನ್ ಎಂದು ಡಿಕೆಶಿ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿ ಮುಂದುವರೆದ ಸಿಎಂ ಕುರ್ಚಿ ಕಿತ್ತಾಟ. ಇಂದು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ-ಡಿಕೆಶಿ. ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಹೋಗುವ ಸಾಧ್ಯತೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ. ಲೋಕಸಭೆ ಚುನಾವಣೆ ಹಿನ್ನೆಲೆ ಎಚ್ಚರಿಕೆಯ ಹೆಜ್ಜೆ.
ಕಾಂಗ್ರೆಸ್ನಲ್ಲಿ ಬಗೆಹರಿಯದ ಸಿಎಂ ಆಯ್ಕೆ ಕಗ್ಗಂಟು. ಕೊಂಚ ಟೆನ್ಷನ್ನಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ. ಮತ್ತೊಂದೆಡೆ ಸಿದ್ದರಾಮಯ್ಯ ಮನೆ ಸುತ್ತ ಪೊಲೀಸರ ಭದ್ರತೆ. ಎಸಿಪಿ, ಇನ್ಸ್ಪೆಕ್ಟರ್, ಮಹಿಳಾ ಸಿಬ್ಬಂದಿಯಿಂದ ಭದ್ರತೆ. ಸಿದ್ದರಾಮಯ್ಯ ಭೇಟಿಗೆ ಬರುತ್ತಿರುವ ಅಭಿಮಾನಿಗಳು.
Karnataka Assembly Election 2023: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಸಿಗಲಿದೆ. ರಾಜ್ಯದ ಮತದಾರರು ಬಿಜೆಪಿಯವರಿಗೆ ತಕ್ಕಪಾಠ ಕಲಿಸಲಿದ್ದಾರೆ. ಮೇ 13ರ ಫಲಿತಾಂಶ ಬರುವವರೆಗೂ ಕಾದು ನೋಡಿ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದರು.
Karnataka Assembly Election 2023: ನಾನು ದಾದಾಗಿರಿ ಮಾಡಲು ಶುರು ಮಾಡಿದರೆ ಕಾಂಗ್ರೆಸ್ನವರು ಮನೆಯಿಂದ ಹೊರಗೆ ಬರಲು ಆಗುವುದಿಲ್ಲ ಅಂತಾ ಮರಗೋಳದಲ್ಲಿ ಹೇಳಿದ್ದಾನಂತೆ. ಆ ಪಾರನಿಗೆ ಗೊತ್ತಿರಲಿ ಚಿತ್ತಾಪುರದ ಈ ಮೊಮ್ಮಗ ಇನ್ನೂ ಜೀವಂತವಾಗಿದ್ದಾನೆಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಪ್ರಜಾತಂತ್ರದ ಹತ್ಯೆ ಮಾತ್ರವಲ್ಲ ವಿರೋಧ ಪಕ್ಷಗಳ ನಾಯಕರ ಹತ್ಯೆಯ ಸಂಚು ಈಗ ಬಯಲಾಗುತ್ತಿದೆ. ಇದೆಲ್ಲದರ ಜವಾಬ್ದಾರಿ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳಾಗಿದ್ದು, ಇವರು ಈ ವಿಚಾರವಾಗಿ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.
Karnataka Assembly Election 2023: ಬಜರಂಗದಳ ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಜರಂಗದಳ ನಿಷೇದಿಸಲು ಸಾಧ್ಯವಿಲ್ಲ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲವೆಂದು ಹೇಳಿದರು.
Karnataka Assembly Election 2023: ಭಜರಂಗದಳ ನಿಷೇಧ ಮಾಡುತ್ತೇವೆಂಬ ಕಾಂಗ್ರೆಸ್ ಹೇಳಿಕೆ ಹಿನ್ನೆಲೆ ಧಾರವಾಡದಲ್ಲಿ ಬಿಜೆಪಿಗೆ ಬೆಂಬಲ ನೀಡಲು ಶ್ರೀರಾಮಸೇನೆ ನಿರ್ಧಾರ ಮಾಡಿದೆ ಎಂದು ಶ್ರೀರಾಮಸೇನೆ ತಾಲೂಕು ಅಧ್ಯಕ್ಷ ಮೈಲಾರ್ ಗುಡ್ಡಪ್ಪನವರ ಹೇಳಿದ್ದಾರೆ.
Karnataka Assembly Election 2023: ದಲಿತ ಮತ್ತು ಬಡವರ ವಿರೋಧಿ ಬಿಜೆಪಿಯನ್ನು ಕಿತ್ತು ಬಿಸಾಕಿ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಪೆಟ್ರೋಲ್-ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಜಾಸ್ತಿಯಾಗಿದೆ. ಬಡವರು ಬದುಕಲು ಕಷ್ಟವಾಗಿದೆ, ಬಿಜೆಪಿ ಬಡವರ ಜೀವನ ಕಷ್ಟ ಮಾಡಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
Karnataka Assembly Election 2023: ಈಗಾಗಲೇ KSRTC, NWRTC, KKRTCಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಟೆಕೆಟ್ ಬುಕಿಂಗ್ ಆಗಿವೆ. ಮೇ 9ರಂದು ರಾತ್ರಿ ಬೆಂಗಳೂರಿನಿಂದ 25 ಲಕ್ಷ ಜನರು ವಿವಿಧ ಜಿಲ್ಲೆಗಳಿಗೆ ಪ್ರಯಾಣಿಸುವ ನಿರೀಕ್ಷೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.