ಟೀಂ ಇಂಡಿಯಾದ ವಿಕೆಟ್ಕೀಪರ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಭಾನುವಾರ 23ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ವಿಶೇಷವೆಂದರೆ ತಮ್ಮ ಹುಟ್ಟುಹಬ್ಬದ ಸಂಭ್ರಮದಂದೇ ಇಶಾನ್ ಕಿಶನ್ ಮತ್ತು ಅವರ ಸಹವರ್ತಿ ಮುಂಬೈ ಇಂಡಿಯನ್ಸ್ ತಂಡದ ಸಹ ಆಟಗಾರ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧ ಕೊಲಂಬೊದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.
2020-21ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ.ಅರ್ಹರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಈ ಮೊದಲು ವಿಶ್ವವಿದ್ಯಾಲಯಗಳು ಕ್ರೀಡೆ ವಿಷಯದಲ್ಲಿ ಹೆಸರು ಮಾಡುತ್ತಿರಲಿಲ್ಲ. ಖೇಲೋ ಇಂಡಿಯಾದ ಮೊದಲ ಚಾಂಪಿಯನ್ಶಿಪ್ನಲ್ಲೇ ಬೆಂಗಳೂರಿನ ವಿದ್ಯಾರ್ಥಿಗಳು ಗೆದ್ದು ಅಭಿಮಾನ ಮೂಡಿಸಿದ್ದಾರೆ- ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ
ಕ್ರಿಕೆಟ್ ಅನಿಶ್ಚಿತತೆಗಳ ಆಟ ಎಂಬುದು ನಮ್ಮ ನಿಮ್ಮೆಲ್ಲರಿಗೂ ತಿಳಿದ ವಿಷಯ. ಈ ಆಟದ ವೇಳೆ ನಿತ್ಯ ಹಲವು ವಿಶಿಷ್ಟ ಹಾಗೂ ವಿನೂತನ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಇಂತಹುದೇ ಒಂದು ಸನ್ನಿವೇಶಕ್ಕೆ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಶ್ ಲೀಗ್ ಸಾಕ್ಷಿಯಾಗಿದೆ.
ಒಡಿಶಾದ ಮಲಕಾಂಗಿರಿಯ ನಕ್ಸಲ್ ಚಟುವಟಿಕೆಗಳಿಗೆ ಕುಖ್ಯಾತಿಯನ್ನು ಪಡೆದಿದೆ. ಆದರೆ ಈಗ ಈ ಪ್ರದೇಶದವನೇ ಆದ ಅಜಯ್ ಎನ್ನುವ ಹುಡುಗ ಸೆಪ್ಟೆಂಬರ್ 1 ರಿಂದ 4 ರ ವರೆಗೆ ಬ್ರಿಟನ್ ನಲ್ಲಿ ನಡೆದ ಮೊದಲ ಅಂತರರಾಷ್ಟ್ರೀಯ ಖೋ ಖೋ ಪಂದ್ಯಾವಳಿಯಲ್ಲಿ ಭಾರತಕ್ಕೆ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾನೆ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.